ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
TSK
TSK · ಙ್ಞಾನೋಕ್ತಿಗಳು 8:18
Treasury of Scripture Knowledge references in Kannada KJV.
ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ