ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.
TSK
TSK · 1 ಪೂರ್ವಕಾಲವೃತ್ತಾ 1:14
Treasury of Scripture Knowledge references in ಕನ್ನಡ IRV.
ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.
¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
¶ ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.
“ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.