ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.
TSK
TSK · 1 ಪೂರ್ವಕಾಲವೃತ್ತಾ 13:8
Treasury of Scripture Knowledge references in ಕನ್ನಡ IRV.
ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.
ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.
ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.
ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.
ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,
ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.