TSK

TSK · 1 ಪೂರ್ವಕಾಲವೃತ್ತಾ 14:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.

¶ ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.

ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.

¶ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

ಅದಕ್ಕಾಗಿ ಹೊರೆ ಹೊರುವ ಎಪ್ಪತ್ತು ಸಾವಿರ ಜನರನ್ನು, ಎಂಭತ್ತು ಸಾವಿರ ಜನರು ಕಲ್ಲುಗಣಿಗಳಲ್ಲಿ ಕೆಲಸ ಮಾಡುವವರನ್ನು, ಇವರ ಮೇಲ್ವೀಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಲ್ವೀಚಾರಕರನ್ನು ಸೊಲೊಮೋನನು ನೇಮಿಸಿದನು.

ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.

ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,