¶ ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.
TSK
TSK · 1 ಪೂರ್ವಕಾಲವೃತ್ತಾ 15:13
Treasury of Scripture Knowledge references in ಕನ್ನಡ IRV.
ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.
ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.
ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.