¶ ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
TSK
TSK · 1 ಪೂರ್ವಕಾಲವೃತ್ತಾ 15:3
Treasury of Scripture Knowledge references in ಕನ್ನಡ IRV.
ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
“ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.
¶ ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.
¶ ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.