¶ ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.
TSK
TSK · 1 ಪೂರ್ವಕಾಲವೃತ್ತಾ 16:41
Treasury of Scripture Knowledge references in ಕನ್ನಡ IRV.
ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”