ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
TSK
TSK · 1 ಪೂರ್ವಕಾಲವೃತ್ತಾ 17:5
Treasury of Scripture Knowledge references in ಕನ್ನಡ IRV.
ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
¶ “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?
¶ “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.