TSK

TSK · 1 ಪೂರ್ವಕಾಲವೃತ್ತಾ 18:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.

ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.

ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.