TSK

TSK · 1 ಪೂರ್ವಕಾಲವೃತ್ತಾ 19:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.

ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.

‹ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.›