¶ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.
TSK
TSK · 1 ಪೂರ್ವಕಾಲವೃತ್ತಾ 21:2
Treasury of Scripture Knowledge references in ಕನ್ನಡ IRV.
ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.
ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.
ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.
ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.