TSK

TSK · 1 ಪೂರ್ವಕಾಲವೃತ್ತಾ 21:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.

ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.

“ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.

ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.

¶ ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.