ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
TSK
TSK · 1 ಪೂರ್ವಕಾಲವೃತ್ತಾ 22:13
Treasury of Scripture Knowledge references in ಕನ್ನಡ IRV.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.
ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.
ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
ಯೇಸು ಪ್ರತ್ಯುತ್ತರವಾಗಿ ಅವನಿಗೆ, ‹“ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” › ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
¶ ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
¶ ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.