“ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.
TSK
TSK · 1 ಪೂರ್ವಕಾಲವೃತ್ತಾ 22:16
Treasury of Scripture Knowledge references in ಕನ್ನಡ IRV.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,
“ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.
ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.