ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.
TSK
TSK · 1 ಪೂರ್ವಕಾಲವೃತ್ತಾ 22:5
Treasury of Scripture Knowledge references in ಕನ್ನಡ IRV.
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.
ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
‹ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.›
ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.