¶ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
TSK
TSK · 1 ಪೂರ್ವಕಾಲವೃತ್ತಾ 23:4
Treasury of Scripture Knowledge references in ಕನ್ನಡ IRV.
¶ ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು.
ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,
¶ ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.
ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.
ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.
ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.