ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
TSK
TSK · 1 ಪೂರ್ವಕಾಲವೃತ್ತಾ 28:9
Treasury of Scripture Knowledge references in ಕನ್ನಡ IRV.
ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.
ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.
¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.
ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.
ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ
ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.
ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.
ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.
ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.
ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು ‹“ಇಗೋ,›‹ಇವನು ನಿಜವಾದ ಇಸ್ರಾಯೇಲನು,›‹ಇವನಲ್ಲಿ ಕಪಟವಿಲ್ಲ”› ಎಂದು ಹೇಳಿದನು.
‹ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು›‹ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ”› ಎಂದನು.
‹ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.›
“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.