¶ ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
TSK
TSK · 1 ಪೂರ್ವಕಾಲವೃತ್ತಾ 29:11
Treasury of Scripture Knowledge references in ಕನ್ನಡ IRV.
¶ ಅಬ್ರಾಮನು, ಸೊದೋಮಿನ ಅರಸನಿಗೆ,
ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.
ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
¶ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
¶ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.