ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
TSK
TSK · 1 ಪೂರ್ವಕಾಲವೃತ್ತಾ 29:14
Treasury of Scripture Knowledge references in ಕನ್ನಡ IRV.
ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
¶ ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.
ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
ಅದಕ್ಕಾತನು, ‹“ನನ್ನ ಕೃಪೆಯೇ ನಿನಗೆ ಸಾಕು,›‹ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ”› ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.