TSK

TSK · 1 ಪೂರ್ವಕಾಲವೃತ್ತಾ 3:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.

¶ ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.

ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು