TSK

TSK · 1 ಪೂರ್ವಕಾಲವೃತ್ತಾ 6:49

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.

¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

¶ “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.

ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.

¶ ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

¶ ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.

¶ ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.

ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,