TSK

TSK · 1 ಪೂರ್ವಕಾಲವೃತ್ತಾ 9:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.

ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.

ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.

ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.

ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,

¶ ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.

ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.

¶ ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.