ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
TSK
TSK · 1 ಕೊರಿಂಥದವರಿಗೆ 13:5
Treasury of Scripture Knowledge references in ಕನ್ನಡ IRV.
ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”
ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›
ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, ‹“ನಿನ್ನ ಕೈ ಚಾಚು”› ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.
ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.
¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.