TSK

TSK · 1 ಯೋಹಾನನು 2:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.

ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.

ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.

ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.

ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,

ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.

ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.

ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,

¶ ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,

ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.

ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.

ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,

ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.

¶ ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.

¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.