ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
TSK
TSK · 1 ಯೋಹಾನನು 4:6
Treasury of Scripture Knowledge references in ಕನ್ನಡ IRV.
ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, ‹“ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ”› ಎಂದು ಉತ್ತರ ಕೊಟ್ಟನು.
‹ಇದಲ್ಲದೆ›‹ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ›‹ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.›
‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”›
‹ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ›‹ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.›
ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, ‹“ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ”› ಎಂದು ಉತ್ತರಕೊಟ್ಟನು.
¶ ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
¶ ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
¶ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
¶ ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.