ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.
TSK
TSK · 1 ಅರಸುಗಳು 13:2
Treasury of Scripture Knowledge references in ಕನ್ನಡ IRV.
¶ ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,
ಆತನು, ‹“ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು”› ಎಂದು ನಿಮಗೆ ಹೇಳುತ್ತೇನೆ ಅಂದನು.