ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
TSK
TSK · 1 ಅರಸುಗಳು 21:11
Treasury of Scripture Knowledge references in ಕನ್ನಡ IRV.
¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು.
ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.
ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”
¶ ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.