TSK

TSK · 1 ಅರಸುಗಳು 21:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

¶ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.