TSK

TSK · 1 ಅರಸುಗಳು 21:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.

ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.

ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.

ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.

ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.

¶ ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.

ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.

‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;

ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.