TSK

TSK · 1 ಅರಸುಗಳು 21:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.

¶ ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.

ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.