¶ ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
TSK
TSK · 1 ಅರಸುಗಳು 21:8
Treasury of Scripture Knowledge references in ಕನ್ನಡ IRV.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,
ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.
ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.
¶ ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.
ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
¶ ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.