TSK

TSK · 1 ಪೇತ್ರನು 1:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.

¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

¶ ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.

ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

ಅದಕ್ಕೆ ಯೇಸು, ‹“ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.›

ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.

‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ”› ಅಂದನು.

‹ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ›‹ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.›

“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

¶ ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.

ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.

ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.

ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.

ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.

ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.

¶ ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.

ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

¶ ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.

¶ ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.