ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
TSK
TSK · 1 ಪೇತ್ರನು 1:13
Treasury of Scripture Knowledge references in ಕನ್ನಡ IRV.
ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.
‹ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.›
‹ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.›
¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.