“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.
TSK
TSK · 1 ಪೇತ್ರನು 1:3
Treasury of Scripture Knowledge references in ಕನ್ನಡ IRV.
¶ ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.
ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.
ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,
¶ ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.
ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.
¶ ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.
¶ ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
¶ ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.