TSK

TSK · 1 ಪೇತ್ರನು 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!

‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›

‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.

ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.

ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.

ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.

ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.

¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.