ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
TSK
TSK · 1 ಪೇತ್ರನು 1:5
Treasury of Scripture Knowledge references in ಕನ್ನಡ IRV.
ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.
‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›
‹ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,›‹ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.›
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
¶ ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,