ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.
TSK
TSK · 1 ಪೇತ್ರನು 1:7
Treasury of Scripture Knowledge references in ಕನ್ನಡ IRV.
ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.
ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
‹ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.›
¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›
‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›
ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.
ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”
¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
‹ಸೈರಣೆಯಿಂದಿರಬೇಕೆಂಬ›‹ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,›‹ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.›
‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’