ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
TSK
TSK · 1 ಪೇತ್ರನು 2:15
Treasury of Scripture Knowledge references in ಕನ್ನಡ IRV.
ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
‹ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.›
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.