TSK

TSK · 1 ಪೇತ್ರನು 2:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.

ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.

ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›

¶ ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.

ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.

ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.

¶ ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,

¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.

¶ ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.

ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.