ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
TSK
TSK · 1 ಪೇತ್ರನು 4:17
Treasury of Scripture Knowledge references in ಕನ್ನಡ IRV.
ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
‹ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.›
ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?
ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.