ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.
TSK
TSK · 1 ಪೇತ್ರನು 4:18
Treasury of Scripture Knowledge references in ಕನ್ನಡ IRV.
ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.›
‹ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?”› ಅಂದನು.
‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.
¶ ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.