ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.
TSK
TSK · 1 ಪೇತ್ರನು 4:2
Treasury of Scripture Knowledge references in ಕನ್ನಡ IRV.
‹ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ”› ಅಂದನು.
‹ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು?› ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ‹ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,›
‹ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.›
ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.
ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.
ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.