ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
TSK
TSK · 1 ಪೇತ್ರನು 4:7
Treasury of Scripture Knowledge references in ಕನ್ನಡ IRV.
“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
‹ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.›
‹ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.›
‹ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು›‹ಎಚ್ಚರವಾಗಿರಿ,›‹ಜಾಗರೂಕರಾಗಿರಿ.›
¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›
ಅವರಿಗೆ, ‹“ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ”› ಎಂದು ಹೇಳಿದನು.
¶ ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
¶ ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
‹“ಇಗೋ›‹ಕಳ್ಳನು ಬರುವಂತೆ ಬರುತ್ತೇನೆ.›‹ತಾನು›‹ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ›‹ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”›