ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.
TSK
TSK · 1 ಸಮುವೇಲನು 2:7
Treasury of Scripture Knowledge references in ಕನ್ನಡ IRV.
¶ ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!
ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.