ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
TSK
TSK · 1 ತಿಮೊಥೆಯನಿಗೆ 1:13
Treasury of Scripture Knowledge references in ಕನ್ನಡ IRV.
ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.
ಆಗ ಯೇಸು, ‹“ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು”› ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
¶ “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.
ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.