TSK

TSK · 1 ತಿಮೊಥೆಯನಿಗೆ 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›

‹ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.›

‹ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.›

ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.

ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.

ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.

ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;

ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.