ಆತನು ಅವರಿಗೆ, ‹“ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”›
TSK
TSK · 1 ತಿಮೊಥೆಯನಿಗೆ 3:7
Treasury of Scripture Knowledge references in ಕನ್ನಡ IRV.
ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.
ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.
ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.