TSK

TSK · 2 ಪೂರ್ವಕಾಲವೃತ್ತಾ 10:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.

ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?

ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು

¶ ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.

¶ ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.

ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.

ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,

¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

‹ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ”› ಅಂದನು.

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.