ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
TSK
TSK · 2 ಪೂರ್ವಕಾಲವೃತ್ತಾ 11:16
Treasury of Scripture Knowledge references in ಕನ್ನಡ IRV.
ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.
ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.
ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.
ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.
ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.