ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,
TSK
TSK · 2 ಪೂರ್ವಕಾಲವೃತ್ತಾ 13:7
Treasury of Scripture Knowledge references in ಕನ್ನಡ IRV.
ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.
ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.